ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಮದುಮಲೈ ಹುಲಿ ಸಂರಕ್ಷಿತ ಅರಣ್ಯಕ್ಕೆ ತೆರಳಲು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾಡಳಿತದಿಂದ ರಾಷ್ಟ್ರಪತಿಗೆ (Droupadi Murmu) ಸ್ವಾಗತ ಸ್ವಾಗತ ಕೋರಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶಿಷ್ಟಾಚಾರದನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಮೇಯರ್ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಪ್ರಾದೇಶಿಕ ಆಯುಕ್ತ ಡಾ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಸ್ವಾಗತ ಕೋರಿದರು.
ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ಮದುಮಲೈ ಹುಲಿ ಸಂರಕ್ಷಿತ ಅರಣ್ಯಕ್ಕೆ ತೆರಳಿದರು. ಆಸ್ಕರ್ ಪ್ರಶಸ್ತಿ ವಿಜೇತ ʼದಿ ಎಲಿಫೆಂಟ್ ವಿಸ್ಪರರ್ಸ್ʼ ಕಿರು ಸಾಕ್ಷ್ಯಚಿತ್ರದ ಖ್ಯಾತಿಯ ಕಾವಾಡಿ ದಂಪತಿ ಬೊಮ್ಮ, ಬೆಳ್ಳಿ ಹಾಗೂ ಕಾವಾಡಿ, ಮಾವುತರ ಜತೆ ಸಂವಾದ ನಡೆಸಲು ಮದುಮಲೈನ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು.
ತೆಪ್ಪಕಾಡು ಆನೆ ಶಿಬಿರದ ಭೇಟಿ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಜೆ, ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ಚೆನ್ನೈನತ್ತ ಪ್ರಯಾಣ ಬೆಳೆಸಲಿದ್ದಾರೆ.