ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ 3 ದಿನಗಳ ಕಾಲ ಅಸ್ಸಾಂ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಷ್ಟ್ರಪತಿ ದ್ರೌಪದಿ ಮುರ್ಮು ಮೂರು ದಿನಗಳ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ ಅಸ್ಸಾಂ ತಲುಪಲಿದ್ದಾರೆ.

ಮುರ್ಮು ಅವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಕಾಜಿರಂಗದಲ್ಲಿ ಗಜ್ ಉಸ್ತಾವ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಗೌಹಾಟಿ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ನೀಡುತ್ತಿರುವ ಮೊದಲ ಭೇಟಿಯಲ್ಲಿ, ಉದ್ಯಾನವನದ ಪ್ರಾಧಿಕಾರದ ಸಂರಕ್ಷಣಾ ಚಟುವಟಿಕೆಗಳನ್ನು ತಿಳಿಯಲು ಸಫಾರಿ ಮಾಡಲಿದ್ದಾರೆ.

ಶುಕ್ರವಾರ ಬೆಳಗ್ಗೆ ಗುವಾಹಟಿಗೆ ತೆರಳುವ ಮೊದಲು ಉದ್ಯಾನವನದಲ್ಲಿ ಎರಡು ದಿನಗಳ ‘ಗಜ್ ಉತ್ಸವ’ವನ್ನು ಉದ್ಘಾಟಿಸಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸುವ ವಾರ್ಷಿಕ ಉತ್ಸವವು ಏಷ್ಯಾಟಿಕ್ ಆನೆಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ ಮತ್ತು ಹೆಚ್ಚುತ್ತಿರುವ ಮಾನವ-ಆನೆ ಸಂಘರ್ಷವನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುತ್ತದೆ.

ಗುವಾಹಟಿಯಲ್ಲಿ ಮೌಂಟ್ ಕಾಂಚನ್‌ಜುಂಗಾ ಎಕ್ಸ್‌ಪೆಡಿಶನ್-2023ಗೆ ಚಾಲನೆ ನೀಡಲಿದ್ದಾರೆ.

ಮುರ್ಮು ಅವರು ಶನಿವಾರ ತೇಜ್‌ಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ದೆಹಲಿಗೆ ವಾಪಸ್‌ ಆಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!