ಆರ್ಥಿಕ ಬಿಕ್ಕಟ್ಟಿನ ನಡುವೆ ಪ್ಧಾನಿ ಸ್ಥಾನದಿಂದ ಮಹಿಂದಾ ರಾಜಪಕ್ಸೆ ಕೆಳಗಿಳಿಸಲು ಅಧ್ಯಕ್ಷ ಗೊಟಬಯ ರಾಜಪಕ್ಸೆ ಸಮ್ಮತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಇದೀ ತಮ್ಮ ಸಹೋದರ ರಾಜಪಕ್ಸ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆದುಹಾಕಲು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಒಪ್ಪಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ವಿಚಾರವಾಗಿ ನೂರಾರು ಟ್ರೇಡ್ ಯೂನಿಯನ್ ಗಳು ಶ್ರೀಲಂಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶ್ರೀಲಂಕಾ ಅಧ್ಯಕ್ಷ ಗೋಟಬಯ ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಗಳು ಕೇಳಿಬರುತ್ತಿವೆ.
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜೊತೆಗೆ ಔಷಧ, ಆಹಾರ ಪದಾರ್ಥಗಳ ಕೊರತೆಯೂ ಉಂಟಾಗಿದೆ.
ಈ ಮಧ್ಯೆ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ರಾಷ್ಟ್ರೀಯ ಮಂಡಳಿಯನ್ನು ನೇಮಿಸಲಾಗುವುದು, ಎಲ್ಲಾ ಪಕ್ಷಗಳನ್ನು ಒಳಗೊಂಡಿರುವ ಕ್ಯಾಬಿನೆಟ್ ನ್ನು ಸಂಸತ್ತಿನಲ್ಲಿ ರಚಿಸಲಾಗುವುದು, ಈ ಪ್ರಕ್ರಿಯೆಗೆ ಅಧ್ಯಕ್ಷ ಗೋಟಬಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ಮೈತ್ರಿಪಾಲ ಸಿರಿಸೇನಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!