ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿನ ಮುಚ್ಚಿಂತಲ್ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 54 ಅಡಿ ಎತ್ತರದ 120 ಕೆಜಿ ಚಿನ್ನದಿಂದ ಕೂಡಿದ ರಾಮಾನುಜಾಚಾರ್ಯರ ಸಮತಾಮೂರ್ತಿ ಸ್ವರ್ಣ ಪ್ರತಿಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು.
ಸ್ವರ್ಣ ಪ್ರತಿಮೆ ಲೋಕಾರ್ಪಣೆಗೂ ಮುನ್ನರಾಮಾನುಜಾಚಾರ್ಯರ ಸಮಾನತಾ ಪ್ರತಿಮೆ ದರುಶನ ಪಡೆದ ಕೋವಿಂದ್ ಅವರು ,108 ವೈಷ್ಣವ ದೇವಾಲಯಗಳನ್ನು ವೀಕ್ಷಿಸಿದರು.
ಶ್ರೀ ಜಗದ್ಗುರು ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಪ್ರಧಾನಿಮೋದಿ ಅವರು 216 ಅಡಿ ಎತ್ತರದ ರಾಮಾನುಜಾಚಾರ್ಯರ ಸಮಾನತಾ ಪ್ರತಿಮೆ ಅನಾವರಣಗೊಳಿಸಿದ್ದರು.