ಮೈಸೂರು ದಸರಾಗೆ ರಾಷ್ಟ್ರಪತಿ ವಿಧ್ಯುಕ್ತ ಚಾಲನೆ: ಐತಿಹಾಸಿಕ ಕ್ಷಣಕ್ಕೆ ಶುರುವಾಗಿದೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಇತಿಹಾಸದಲ್ಲಿಯೇ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಕ್ಷಣವೊಂದಕ್ಕೆ ಕ್ಷಣಗಣನೆ ಆರಂಭವಾಗಿದೆ.
ಐತಿಹಾಸಿಕ ನಾಡಹಬ್ಬ ದಸರಾಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದು, ರಾಷ್ಟ್ರಪತಿಯಾಗಿ ಅಧಿಕಾರವಹಿಸಿದ ಬಳಿಕ ಅವರು ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಗಲಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಕಳೆಗುಂದಿದ್ದ ಮೈಸೂರು ದಸರಾ ಈ ಬಾರಿ ವೈಭವದಿಂದ ನೆರವೇರಲಿದೆ. ಉದ್ಘಾಟನೆಗೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ಬೆಟ್ಟದ ಸನ್ನಿಧಿಯಲ್ಲಿ ದೇವಿ ದರ್ಶನ ಪಡೆಯಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!