ರಾಜ್ಯಕ್ಕೆ ರಾಷ್ಟ್ರಪತಿ ಭೇಟಿ: ಹೇಗಿದೆ? ಏನೇನಿದೆ ಕಾರ್ಯಕ್ರಮಗಳು ಮುರ್ಮು ಪ್ರವಾಸದಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐತಿಹಾಸಿಕ ಮೈಸೂರು ದಸಾರಾಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ, ಬಳಿಕ ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನೂತನ ಕ್ಯಾಂಪಸ್‌ನ್ನು ಉದ್ಘಾಟಿಸಲಿದ್ದಾರೆ.
ಮಂಗಳವಾರ ಅವರು ಬೆಂಗಳೂರಿನ ಹೆಚ್‌ಎಎಲ್‌ನ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯ ಉದ್ಘಾಟಿಸಲಿದ್ದು, ದಕ್ಷಿಣ ವಲಯ ವೈರಾಣು ಸಂಸ್ಥೆಗೆ ಕೂಡಾ ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಳಿಕ ಸೆಂಟ್ ಜೋಸೆಫ್ ವಿವಿ ಸಮಾರಂಭ, ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ, ಸೆ.28 ರಂದು ರಾಷ್ಟ್ರಪತಿ ನವದೆಹಲಿಗೆ ವಾಪಸ್ಸಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!