ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾಡಪ್ರಭು ಕೆಂಪೇಗೌಡ ಜಯಂತಿ ಹೆಸರಲ್ಲಿ ಬಿಬಿಎಂಪಿಯಿಂದ ನೀಡುವ ಪ್ರತಿಷ್ಠಿತ ಕೇಂಪೇಗೌಡ ಪ್ರಶಸ್ತಿ ಪ್ರಕಟಗೊಂಡಿದೆ. ಸಮಾಜಸೇವೆ, ಮಾಧ್ಯಮ, ನ್ಯಾಯವಾದಿ, ಆಡಳಿತ, ವೈದ್ಯಕೀಯ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆಗೈದ 52 ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್, ಸಿದ್ಧಯ್ಯ ಸೇರಿದಂತೆ ಮಾಧ್ಯಮ ಕ್ಷೇತ್ರದ ಐವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ (ಜೂ.27) ಸಂಜೆ ಆರು ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಈ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
ಹೆಲಿಕ್ಯಾಪ್ಟರ್ ಪೈಲೆಟ್ ನಂದಕುಮಾರ್, ಕೆಎಎಸ್ ಎಸ್ಐಎ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಸಮಾಜಸೇವೆ ವಿಭಾಗದಲ್ಲಿ ಅರುಣ್ ಪೈ, ಕಣ್ವ ಆಸ್ಪತ್ರೆಯ ಡಾ. ವೆಂಕಪ್ಪ, ಸರ್ವೋಚ್ಚ ನ್ಯಾಯಾಲಯ ವಕೀಲ ಶ್ಯಾಮ್ಸುಂದರ್, ಬ್ಲೈಂಡ್ ಸ್ಕೂಲ್ ಚಂದ್ರಶೇಖರ್ ರಾಜು ಸೇರಿದಂತೆ ಒಟ್ಟು 52 ಸಾಧಕರಿಗೆ ಪ್ರಶಸ್ತಿ ನಾಳೆ ಪ್ರಧಾನ ಮಾಡಲಾಗುತ್ತದೆ.