ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿ ಮೋದಿ, ಅಮಿತ್ ಶಾ ಅವರು ರಾಮ ಲಕ್ಷ್ಮಣ ಇದ್ದಂತೆ. ಅವರ ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮದಲ್ಲಿ ಆಶೀ೯ವಚನ ನೀಡಿದ ಸ್ವಾಮೀಜಿ, ‘ನಾನು ಪರಮಪೂಜ್ಯರನ್ನು ಇಲ್ಲಿ ನೆರೆದಿರುವ ನಿಮ್ಮಲ್ಲಿ ಕಾಣುತ್ತಿದ್ದೇನೆ.ಸುತ್ತೂರು ಮಠ, ಸಿದ್ದಗಂಗಾ ಮಠ ಸಮಾಜದ ಎರಡು ಕಣ್ಣುಗಳು ಇದ್ದಂತೆ’ ಎಂದರು.
ಉಕ್ರೇನ್ ಯುದ್ಧದ ವೇಳೆ ಮಕ್ಕಳನ್ನ ಜೀವಂತವಾಗಿ ಕರೆ ತಂದಿದ್ದಾರೆ. ಕೇಂದ್ರ ಸರ್ಕಾರದ ಬದ್ಧತೆ ಬಗ್ಗೆ ಇದರಲ್ಲಿ ಗೊತ್ತಾಗುತ್ತೆ. ನರೇಂದ್ರ ಮೋದಿ, ಅಮಿತ್ ಶಾ ಅವರು ರಾಮ ಲಕ್ಷ್ಮಣ ಇದ್ದಂತೆ.ಅವರ ಮಾರ್ಗದರ್ಶನದಲ್ಲಿ ಬೊಮ್ಮಾಯಿರಿಂದ ಉತ್ತಮ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.