ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್ನ ಬಹಗಾನಾ ರೈಲು ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 240ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಅವರು ತುರ್ತು ಸಭೆ ಕರೆದಿದ್ದು, ಘಟನೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚೆ ಮಾಡಲಿದ್ದಾರೆ.