ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.
ನೀವು ಹಾಗೂ ಬಿ.ಎಸ್. ಯಡಿಯೂರಪ್ಪ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೀರಿ, ಪಕ್ಷ ನಿಮ್ಮ ಜೊತೆ ಸದಾ ಇರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದಕ್ಕೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ನೀವು ಫೋನ್ ಮಾಡಿದ್ದು ಖುಷಿಯಾಗಿದೆ, ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿರುವುದು ದೊಡ್ಡ ವಿಚಾರ, ಶಿವಮೊಗ್ಗದಲ್ಲಿ ನಾವು ಖಂಡಿತಾ ಗೆಲ್ಲುತ್ತೇವೆ ಎಂದಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಿ ಎಂದಾಗ ಈಶ್ವರಪ್ಪ ಮರುಮಾತನಾಡದೆ ನಿವೃತ್ತಿ ಪಡೆದಿದ್ದಾರೆ. ಇನ್ನು ತಮ್ಮ ಪುತ್ರ ಕಾಂತೇಶ್ಗೆ ಶಿವಮೊಗ್ಗದಿಂದ ಟಿಕೆಟ್ ಸಿಗಬಹುದು ಎಂದು ಈಶ್ವರಪ್ಪ ನಿರೀಕ್ಷೆ ಇಟ್ಟಿದ್ದರು ಆದರೆ ಅದು ಕೂಡ ಆಗಲಿಲ್ಲ. ಆದರೂ ಈಶ್ವರಪ್ಪ ಬಿಜೆಪಿ ಬಗ್ಗೆ ಎಲ್ಲಿಯೂ ಮಾತನಾಡದೆ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರನ್ನು ಗೆಲ್ಲಿಸುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಪಕ್ಷ ನಿಷ್ಠಗೆ ಮೆಚ್ಚಿ ಸ್ವತಃ ಪ್ರಧಾನಿ ಮೋದಿ ಅವರೇ ಕರೆ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ.
#KarnatakaElections2023 | PM Modi held a telephonic conversation with Karnataka BJP leader and former minister KS Eshwarappa.
(Source: KS Eshwarappa) pic.twitter.com/DxUn5bTVU3
— ANI (@ANI) April 21, 2023