ಉತ್ತರಾಖಂಡ ಸಿಎಂಗೆ ಕರೆ ಮಾಡಿ ಉತ್ತರಕಾಶಿ ಸುರಂಗದೊಳಗೆ ಸಿಕ್ಕಿಬಿದ್ದ ಕಾರ್ಮಿಕರ ಮಾಹಿತಿ ಪಡೆದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ನವೆಂಬರ್ 12 ರಿಂದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು.

‘ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ… ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ಸ್ಥಿತಿ ಮತ್ತು ಅವರಿಗೆ ಒದಗಿಸಲಾದ ಆಹಾರ ಮತ್ತು ದಿನನಿತ್ಯದ ವಸ್ತುಗಳ ಬಗ್ಗೆಯೂ ಪ್ರಧಾನಿ ವಿಚಾರಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾದ ಸಿಬ್ಬಂದಿಯ ಸ್ಥಿತಿ ಮತ್ತು ಸುರಕ್ಷತೆಯ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ’ ಎಂದು ಉತ್ತರಾಖಂಡದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಕಾರ್ಮಿಕರು ಸುರಂಗದಿಂದ ಹೊರಗೆ ಬಂದಾಗ ಅವರ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಆರೈಕೆಗೆ ವಿಶೇಷ ಗಮನ ನೀಡಬೇಕು ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿಗೆ ವಿಶೇಷ ಸೂಚನೆ ನೀಡಿದರು ಎಂದು ಅದು ಹೇಳಿದೆ. ಸಿಲ್ಕ್ಯಾರಾ ಸುರಂಗದಲ್ಲಿ ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನೆಲಮಟ್ಟದಲ್ಲಿ ಮೇಲ್ವಿಚಾರಣೆ ಮಾಡುವುದರ ಜೊತೆಗೆ ಸಿಎಂ ಧಾಮಿ ಪ್ರಧಾನಿಗೆ ಮಾಹಿತಿ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!