ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡವು ಥಾಮಸ್ ಕಪ್ನ್ನು ಮೊದಲ ಬಾರಿಗೆ ಗೆದ್ದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಫೋನ್ ಕರೆ ಮೂಲಕ ಮಾತನಾಡಿ ಅಭಿನಂದಿಸಿದ್ದಾರೆ. ಬ್ಯಾಂಕಾಕ್ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಮೂಲಕ ಇತಿಹಾಸ ಸೃಷ್ಟಿಸಿದೆ.
ಭಾರತ ತಂಡವು ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿದ ನಂತರ, ಪ್ರಧಾನಿ ಮೋದಿ ಅವರು ಆಟಗಾರರೊಂದಿಗೆ ವೈಯಕ್ತಿಕವಾಗಿ ಫೋನ್ ಕರೆಯಲ್ಲಿ ಮಾತನಾಡಿದರು.
ಥಾಮಸ್ ಕಪ್ ಗೆದ್ದು 135 ಕೋಟಿ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ನಮ್ಮ ಬ್ಯಾಡ್ಮಿಂಟನ್ ಚಾಂಪಿಯನ್ಗಳೊಂದಿಗೆ ವಿಶೇಷ ಸಂವಾದ ಎಂದು ಮೋದಿ ವಿಡಿಯೋದೊಂದಿಗೆ ಟ್ವೀಟ್ ಮಾಡಿದ್ದಾರೆ.
A special interaction with our badminton 🏸 champions, who have won the Thomas Cup and made 135 crore Indians proud. pic.twitter.com/KdRYVscDAK
— Narendra Modi (@narendramodi) May 15, 2022
ಒಂದು ಕೋಟಿ ರೂ. ಬಹುಮಾನ:
ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಕ್ರೀಡಾ ಸಚಿವಾಲಯವು ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾನುವಾರ 1 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಬ್ಯಾಡ್ಮಿಂಟನ್ ಸಾಧಕರಿಗೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದ್ದು, ಹಲವು ಕ್ರೀಡಾ ದಿಗ್ಗಜರು, ಪ್ರಮುಖ ರಾಜಕೀಯ ಮುಖಂಡರು ಸೇರಿದಂತೆ ಹಲವರು ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.