ಜಗತ್ತನ್ನೇ ಬೆರಗಾಗಿಸಿದ ‘ಆಪರೇಷನ್ ಸಿಂಧೂರ’ ಸಾರಥಿಗಳಿಗೆ ಶಹಬ್ಬಾಸ್ ಎಂದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಸೇನೆಯ ನಡುರಾತ್ರಿಯ ಆಪರೇಷನ್ ಸಿಂಧೂರಕ್ಕೆ ಈಗ ಜಾಗತಿಕವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ ಸೇನೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸ್ ಹೇಳಿದ್ದಾರೆ.

ದಾಳಿಯ ಬೆನ್ನಿಗೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಖುದ್ದು ಭೇಟಿ ಮಾಡಿದ ಪ್ರಧಾನಿ ಮೋದಿ, ಅವರೊಂದಿಗೆ ಚರ್ಚೆ ನಡೆಸಿದರು. ಬಳಿಕ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ಆಯೋಜಿಸಲಾಯಿತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಯಾವುದೇ ದೋಷವಿಲ್ಲದೇ ಗುರಿ ಮುಟ್ಟಿ ಯಶಸ್ವಿಯಾಗಿದೆ ಎಂದು ಈ ಸಂದರ್ಭ ಮೋದಿ ಭಾರತೀಯ ಸಶಸ್ತ್ರ ಪಡೆಯನ್ನು ಶ್ಲಾಸಿದರು.

ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ ಅವರು, ಭಾರತೀಯ ಸೇನೆ ಅಂದುಕೊಂಡ ಹಾಗೆ ಯಾವುದೇ ದೋಷಗಳಿಲ್ಲದೇ ಕಾರ್ಯಾಚರಣೆಯ ಗುರಿ ತಲುಪಿದೆ. ಇಡೀ ದೇಶ ಭಾರತೀಯ ಸೇನೆಯೊಂದಿಗಿದೆ ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!