ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದಿನಿಂದ ನ.4ರವರೆಗೆ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ ನಡೆಯಲಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ವರ್ಚುಯಲ್ ಆಗಿ ಚಾಲನೆ ನೀಡಿದ್ದಾರೆ. ಈ ಸಮಾವೇಶದಲ್ಲಿ ಏಳು ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಇದೆ ಜತೆಗೆ ಖಾಸಗಿ ವಲಯದಲ್ಲಿ ಮೂರು ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ಮಾನ್ಯ ಪ್ರಧಾನಿ ಶ್ರೀ @narendramodi ಅವರು ಉದ್ಘಾಟಿಸಲಿರುವ ಇಂದಿನ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯಕ್ಕೆ ₹7 ಲಕ್ಷ ಕೋಟಿ ಹೂಡಿಕೆಯಾಗಲಿದ್ದು, ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನೀರಿಕ್ಷೆಯಿದೆ. ಈ ಸಮಾವೇಶವು ರಾಜ್ಯದ ಭವಿಷ್ಯದ ಆರ್ಥಿಕತೆಗೆ ದಿಕ್ಸೂಚಿಯಾಗಲಿದೆ.#InvestKarnataka2022 pic.twitter.com/BYnkbP6F3T
— Basavaraj S Bommai (@BSBommai) November 2, 2022
ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಸಿಎಂ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವರಾದ ಪಿಯೂಷ್ ಗೋಯಲ್, ಪ್ರಹ್ಲಾದ ಜೋಶಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಪ್ರಮುಖ ಉದ್ಯಮಿಗಳು ಭಾಗಿಯಾಗಿದ್ದಾರೆ.
ಕುಮಾರಮಂಗಳಂ ಬಿರ್ಲಾ, ವಿಕ್ರಮ್ ಕಿರ್ಲೋಸ್ಕರ್, ರಿಶಾದ್ ಪ್ರೇಮ್ಜಿ, ಕರಣ್ ಅದಾನಿ, ಸಜ್ಜನ್ ಜಿಂದಾಲ್, ರಾಜನ್ ಮಿತ್ತಲ್, ಪ್ರತೀಕ್ ಅಗರ್ವಾಲ್, ಜೆವ್ ಸಿಗೆಲ್ ಸೇರಿದಂತೆ ಇನ್ನಷ್ಟು ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
#BuildForTheWorld #Karnataka is a global #innovation and #startup hub with more than 400+ global R&D centers in the state!
Learn more about #InvestKarnataka2022 – https://t.co/GHQqFnoCbo#InvestinKarnataka pic.twitter.com/MiiQOdx056
— Invest in Karnataka (@investkarnataka) November 1, 2022