‘ಇನ್ವೆಸ್ಟ್ ಕರ್ನಾಟಕ’ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ, ಏಳು ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಇಂದಿನಿಂದ ನ.4ರವರೆಗೆ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ ನಡೆಯಲಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ವರ್ಚುಯಲ್ ಆಗಿ ಚಾಲನೆ ನೀಡಿದ್ದಾರೆ. ಈ ಸಮಾವೇಶದಲ್ಲಿ ಏಳು ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಇದೆ ಜತೆಗೆ ಖಾಸಗಿ ವಲಯದಲ್ಲಿ ಮೂರು ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

 

ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಸಿಎಂ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವರಾದ ಪಿಯೂಷ್ ಗೋಯಲ್, ಪ್ರಹ್ಲಾದ ಜೋಶಿ, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಪ್ರಮುಖ ಉದ್ಯಮಿಗಳು ಭಾಗಿಯಾಗಿದ್ದಾರೆ.

ಕುಮಾರಮಂಗಳಂ ಬಿರ್ಲಾ, ವಿಕ್ರಮ್ ಕಿರ್ಲೋಸ್ಕರ್, ರಿಶಾದ್ ಪ್ರೇಮ್‌ಜಿ, ಕರಣ್ ಅದಾನಿ, ಸಜ್ಜನ್ ಜಿಂದಾಲ್, ರಾಜನ್ ಮಿತ್ತಲ್, ಪ್ರತೀಕ್ ಅಗರ್‌ವಾಲ್, ಜೆವ್ ಸಿಗೆಲ್ ಸೇರಿದಂತೆ ಇನ್ನಷ್ಟು ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!