ಮಹಾರಾಷ್ಟ್ರ ಬಸ್‌ ದುರಂತ: ಪ್ರಧಾನಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಬಸ್ ಅಪಘಾತದಲ್ಲಿ 10 ಪ್ರಯಾಣಿಕರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಸ್ಲೀಪರ್ ಬಸ್ ಡೀಸೆಲ್ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ದುರ್ಘಟನೆಯಲ್ಲಿ 10 ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ.

ಬಸ್ ಅಪಘಾತದ ಸುದ್ದಿ ತಿಳಿದ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಸಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಅಪಘಾತದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡಾ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಶಿಂಧೆ ಸರ್ಕಾರ ಘೋಷಿಸಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸುವುದಾಗಿ ತಿಳಿಸಿದರು.

ಬಸ್‌ ಅಪಘಾತಕ್ಕೀಡಾದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!