ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರ ಜೊತೆ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಕಾರ್ಮಿಕರು ಒಂದೇ ಸ್ಥಳದಲ್ಲಿದ್ದ ವೇಳೆ ಫೋನ್ ಮಾಡಿ ಎಲ್ಲರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಸುರಂಗ ಕೊರೆದು ಕಾರ್ಮಿಕರನ್ನು ಹೊರತರಲು ಎಷ್ಟು ಕಷ್ಟಪಟ್ಟಿದ್ದೇವೆಯೋ ಅದೇ ರೀತಿ ಮಾನಸಿಕವಾಗಿ ಕುಗ್ಗದೇ ಕಾರ್ಮಿಕರೂ ಸಾಥ್ ನೀಡಿದ್ದಾರೆ. ಕಾರ್ಮಿಕರು ಹಾಗೂ ಸಿಬ್ಬಂದಿಗಳ ಪರಿಶ್ರಮದಿಂದ ರಕ್ಷಣೆ ಸಾಧ್ಯವಾಗಿದೆ ಎಂದಿದ್ದಾರೆ.
ಕಾರ್ಮಿಕರನ್ನು ಸುರಂಗದಿಂದ ಹೊರತಂದಕೂಡಲೇ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದರು. ಉತ್ತರಕಾಶಿಯಲ್ಲಿ ಕಾರ್ಮಿಕ ಸಹೋದರರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸ್ಫೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ ಎಂದು ಹೇಳಿದ್ದರು.
ನವೆಂಬರ್ 12 ರಂದು ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದಿತ್ತು. ಅದರಲ್ಲಿ 41 ಕಾರ್ಮಿಕರು ಸಿಲುಕಿಹಾಕಿಕೊಂಡಿದ್ದರು. ಸತತ ಪ್ರಯತ್ನಗಳ ನಂತರ ನಿನ್ನೆಯಷ್ಟೇ ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.