ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ರೋಡ್ ಶೋ ಬಳಿಕ ಪ್ರಧಾನಿ ಮೋದಿಯವರು ಮಲೆನಾಡಿನತ್ತ ತಮ್ಮ ಚಿತ್ತವನ್ನು ಹರಿಸಿದ್ದಾರೆ. ಶಿವಮೊಗ್ಗದ ಆಯನೂರಿನಲ್ಲಿ ಬೃಹತ್ ಪ್ರಚಾರ ಸಭೆಯಿದ್ದು, ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಇಲ್ಲಿಂದ ಹೆಲಿಕಪ್ಟಾರ್ ಮೂಲಕ ಆಯನೂರಿಗೆ ತೆರಳಲಿದ್ದಾರೆ. ಅಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ.07)ಮಲೆನಾಡು ಶಿವಮೊಗ್ಗದ ಆಯನೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆ ಮಧ್ಯಾಹ್ನ ಬೃಹತ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಬಜರಂಗಬಲಿ ಆಕೃತಿ ಗಿಫ್ಟ್ ಕೊಡಲು ಜಿಲ್ಲಾ ಬಿಜೆಪಿ ಘಟಕ ಸಿದ್ದವಾಗಿದೆ.