ಪ್ರಧಾನಿ ಮೋದಿ ಭೇಟಿಯಾದ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದು, ಈ ವೇಳೆ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ವಿವರಿಸಿ, ಆರ್ಥಿಕ ಸ್ಥಿತಿ ಸುಧಾರಿಸಲು 50,000 ಕೋಟಿ ರೂ. ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಭಗವಂತ್ ಮಾನ್​, ರಾಷ್ಟ್ರೀಯ ಭದ್ರತೆ ಕಾಪಾಡಿಕೊಳ್ಳಲು ನಮಗೆ ಕೇಂದ್ರದ ಬೆಂಬಲ ಬೇಕು. ಪಂಜಾಬ್​ನಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಲ್ಲಿನ ಪರಿಸ್ಥಿತಿ ಸುಧಾರಿಸಲು ಮುಂದಿನ ಎರಡು ವರ್ಷಗಳವರೆಗೆ ಪ್ರತಿ ವರ್ಷ 50,000 ಸಾವಿರ ಕೋಟಿ ರೂ. ಪ್ಯಾಕೇಜ್​​ಗೆ ಬೇಡಿಕೆ ಇಟ್ಟಿದ್ದೇವೆ ಎಂದರು.
ಗಡಿ ಸಮಸ್ಯೆ, ಡ್ರಗ್ಸ್​ ಸಾಗಾಣಿಕೆ ಸೇರಿದಂತೆ ಕೆಲ ಮಹತ್ವದ ವಿಷಯಗಳ ಕುರಿತಾಗಿಯೂ ಪ್ರಧಾನಿ ಹಾಗೂ ಕೇಂದ್ರ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!