ಪೊರಕೆ ಹಿಡಿದು ಶ್ರಮದಾನ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿಯವರು ಕುಸ್ತಿಪಟು ಅಂಕಿತ್‌ ಅವರೊಂದಿಗೆ ಪಾರ್ಕ್‌ನಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಧಾನಿಯವರು ಕರೆ ಕೊಟ್ಟಿರುವ ‘ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್’ ಎಂಬ ಬೃಹತ್ ಸ್ವಚ್ಛತಾ ಅಭಿಯಾನ ‍ಶ್ರಮದಾನಕ್ಕೆ ದೇಶಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ, ʼರಾಷ್ಟ್ರದ ಸ್ವಚ್ಛತೆಗೆ ಆದ್ಯತೆ ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಸ್ವಚ್ಛತೆಯ ಹೊರತಾಗಿ ಫಿಟ್‍ನೆಸ್ ಮತ್ತು ಆರೋಗ್ಯದ ಬಗ್ಗೆಯೂ ಚರ್ಚಿಸಿದ್ದೇವೆ. ಈ ಮೂಲಕ ಸ್ವಚ್ಛ ಮತ್ತು ಸ್ವಸ್ತ್ ಭಾರತ ಎಂಬ ಪರಿಕಲ್ಪನೆಯನ್ನು ಬಿತ್ತಲಾಗಿದೆʼ ಎಂದು ಅವರು ಬರೆದುಕೊಂಡಿದ್ದಾರೆ.

“ಮನ್ ಕಿ ಬಾತ್” ನ ಇತ್ತೀಚಿನ ಸಂಚಿಕೆಯಲ್ಲಿ, ಮೋದಿ ಭಾನುವಾರ ಎಲ್ಲಾ ನಾಗರಿಕರಿಂದ “ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ”ಕ್ಕಾಗಿ ಮನವಿ ಮಾಡಿದರು. ಮಹಾತ್ಮ ಗಾಂಧಿಯವರಿಗೆ ಅವರ ಜನ್ಮದಿನದ ಮುನ್ನ ದಿನದಂದು “ಸ್ವಚ್ಛಾಂಜಲಿ” ಎಂದು ಹೇಳಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!