ಹೊಸದಿಗಂತ ಡಿಜಿಟಲ್ ಡೆಸ್ಕ್ :
ದಾವಣಗೆರೆಯಲ್ಲಿ ನಡೆಯುತ್ತಿರುವ ವಿಜಯ್ ಸಂಕಲ್ಪ ಯಾತ್ರೆ ಮಹಾ ಸಂಗಮ ಕಾಯ೯ಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ,ಮೊನ್ನೆಯಷ್ಟೇ ನಡೆದ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣಾ ಫಲಿತಾಂಶವನ್ನು ಉಲ್ಲೇಖ ಮಾಡಿದ್ದಾರೆ.
ವಿಜಯ್ ಸಂಕಲ್ಪ ಯಾತ್ರೆ ಮಹಾ ಸಂಗಮದಲ್ಲಿ ಮಾತನಾಡಿದ ಪ್ರಧಾನಿ, ಒಂದು ಕಡೆ ದಾವಣಗೆರೆಯಲ್ಲಿ ವಿಜಯ್ ಸಂಕಲ್ಪ ಯಾತ್ರೆ ನಡೆಯುತ್ತಿದ್ದರೆ,ಇನ್ನೊಂದೆಡೆ ಮೊನ್ನೆಯಷ್ಟೇ ಕನಾ೯ಟಕದ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿ ನಮ್ಮ ಪಕ್ಷದ ಮೇಯರ್ ಹಾಗೂ ಉಪ ಮೇಯರ್ ಸ್ಥಾನವನ್ನು ಗೆದ್ದು,ವಿಜಯದ ಡಂಕೆಯನ್ನು ಭಾರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದ್ದಾರೆ.