ಹೊಸದಿಗಂತ ಡಿಜಿಟಲ್ ಡೆಸ್ಕ್:
500 ವರ್ಷಗಳ ನಿರಂತರ ಹೋರಾಟ ಹಾಗೂ ಶ್ರಮದ ಫಲವಾಗಿ ಇಂದು ಅಯೋಧ್ಯೆ ರಾಮಮಂದಿರದಲ್ಲಿ (Ram Temple) ರಾಮಲಲಾನ ಪ್ರಾಣ ಪ್ರತಿಷ್ಠಪಾನೆಗೊಂಡಿದ್ದಾರೆ.
#WATCH | Prime Minister Narendra Modi showers flower petals on the workers who were a part of the construction crew at Ram Temple in Ayodhya, Uttar Pradesh. pic.twitter.com/gJp4KSnNp6
— ANI (@ANI) January 22, 2024
ಇದರ ನಡುವೆ ರಾಮಮಂದಿರದ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರನ್ನು ಮರೆಯುವಂತಿಲ್ಲ. ಈ ಸುಂದರ ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲ ಕಾರ್ಮಿಕರಿಗೂ ಪ್ರಧಾನಿ ಮೋದಿ ಅವರು ಪುಷ್ಪವೃಷ್ಟಿ ಮಾಡುವ ಮೂಲಕ ಅವರಿಗೆ ಧನ್ಯವಾದ ತಿಳಿಸಿದರು.
ಧಾರ್ಮಿಕ ವಿಧಿವಿಧಾನದ ಮೂಲಕ ರಾಮಲಲಾನ ಪ್ರತಿಷ್ಠೆ ನಂತರ ದೇಶದ ರಾಮಭಕ್ತರನ್ನುದ್ದೇಶಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ನಂತರ ವೇದಿಕೆಯ ಕಾರ್ಯಕ್ರಮ ಮುಗಿದ ನಂತರ ರಾಮಮಂದಿರ ಕಾರ್ಯಕ್ರಮಕ್ಕೆ ಬಂದಿದ್ದ ಅನೇಕ ಗಣ್ಯರನ್ನು ಭೇಟಿಯಾಗಿ ಅವರಿಗೂ ಧನ್ಯವಾದ ತಿಳಿಸಿದರು. ಅಲ್ಲಿಂದ ರಾಮಮಂದಿರ ನಿರ್ಮಾಣಕ್ಕಾಗಿ ಹಗಲು-ರಾತ್ರಿ ಎನ್ನದೇ ದುಡಿದ ಕಾರ್ಮಿಕರ ಮೇಲೆ ಪುಷ್ಪವೃಷ್ಟಿ ಮಾಡಿದರು.