ಬೆಂಗಾವಲು ಪಡೆ ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಮಾಚಲ ಪ್ರದೇಶದ ಕಾಂಗ್ರಾಕ್ಕೆ ವಿಧಾನಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಹೊರಟಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಾವಲು ಪಡೆಯನ್ನು ತಡೆದು ಅಂಬುಲೆನ್ಸ್‌ಗೆ ಹೋಗಲು ದಾರಿ ಮಾಡಿಕೊಟ್ಟಿದ್ದಾರೆ.

ಕಾಂಗ್ರಾಕ್ಕೆ ಸಂಚರಿಸುತ್ತಿದ್ದ ವೇಳೆ ದಾರಿಯಲ್ಲಿ ಅಂಬುಲೆನ್ಸ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಅಂಬುಲೆನ್ಸ್‌ಗೆ ದಾರಿ ಬಿಟ್ಟಿದೆ. ಅಂಬುಲೆನ್ಸ್ ಹೋದ ನಂತರ ಮೋದಿ ಬೆಂಗಾವಲು ಪಡೆ ಚುನಾವಣಾ ಪ್ರಚಾರಕ್ಕೆ ತೆರಳಿದೆ.

ಈ ಹಿಂದೆ ಗುಜರಾತ್ ಭೇಟಿಯ ವೇಳೆ ಅಂಬುಲೆನ್ಸ್ ಗೆ ಅವಕಾಶ ಮಾಡಿಕೊಡಲು ಪ್ರಧಾನಿ ಮೋದಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!