ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ಮಾತುಕತೆ ನಡೆಸಿದ್ದಾರೆ.
ಖಾರ್ಕೀವ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಬೇಕಿದೆ. ಇದು ಸದ್ಯದ ಆದ್ಯತೆ ಹಾಗೂ ಅಗತ್ಯ ಎಂದು ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ಗೆ ಮನದಟ್ಟು ಮಾಡಿಸಿದ್ದಾರೆ.
ದೂರವಾಣಿ ಮೂಲಕ ಅಧ್ಯಕ್ಷ ಪುಟಿನ್ ಜತೆ ಮಾತನಾಡಿದ್ದು, ಭಾರತೀಯ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಬಗ್ಗೆ ಮಾತುಕತೆ ನಡೆದಿದೆ.
ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೂರವಾಣಿ ಸಂಭಾಷಣೆ ಕುರಿತಾದ ಹೇಳಿಕೆ ಬಿಡುಗಡೆ ಮಾಡಿದೆ. ಉಕ್ರೇನ್- ರಷ್ಯಾ ಯುದ್ಧ, ಖಾರ್ಕೀವ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪರಿಸ್ಥಿತಿ ಬಗ್ಗೆ ಹೆಚ್ಚಿನ ಮಾತುಕತೆ ನಡೆದಿದೆ ಎನ್ನಲಾಗಿದೆ.