ಮೇ5 ರಂದು ಗಣಿನಾಡಿಗೆ ಪ್ರಧಾನಿ ಮೋದಿ: ಬೃಹತ್ ವೇದಿಕೆ ನಿರ್ಮಾಣಕ್ಕೆ ಚಾಲನೆ

ಹೊಸದಿಗಂತ ವರದಿ ಬಳ್ಳಾರಿ: 

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಪ್ರಧಾನಮಂತ್ರಿ ಮೋದಿ ಅವರು ಮೇ.5ಕ್ಕೆ ನಗರಕ್ಕೆ ಆಗಮಿಸಲಿದ್ದು, ವೇದಿಕೆ ನಿರ್ಮಾಣಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ನಗರದ ಕಪ್ಪಗಲ್ ರಸ್ತೆಯ ಸತ್ಯಂ ಶಾಲೆ ಎದುರಿನ ಬಯಲು ಮೈದಾನದಲ್ಲಿ ನಡೆಯುವ ಸ್ಥಳದಲ್ಲಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ವಿಶೇಷ ಪೂಜೆ ಸಲ್ಲಿಸಿ, ವೇದಿಕೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ಮುಖಂಡರಾದ ರಾಮಲಿಂಗಪ್ಪ, ವಿರುಪಾಕ್ಷಗೌಡ, ವೀರಶೇಖರ ರೆಡ್ಡಿ, ಮಲ್ಲನಗೌಡ, ಜಿಲ್ಲಾ ಮಹಿಳಾ ಮೋರ್ಚಾದ ಸುಗುಣ, ನ್ಯಾ.ವಿಜಯಲಕ್ಷ್ಮಿ, ಮಾಧ್ಯಮ ವಕ್ತಾರ ರಾಜೀವ್ ತೊಗರಿ, ರಮೇಶ್ ದರೋಜಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!