ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಮನ ದರುಶನ ಪಡೆದಿದ್ದಾರೆ.
ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೋದಿ, ನಾಮಪತ್ರ ಸಲ್ಲಿಕೆಗೂ ಮೊದಲು ಅಯೋಧ್ಯೆ ರಾಮ ಮಂದಿರಕ್ಕೆ ತೆರಳಿ ರಾಮನ ದರುಶನ ಪಡೆದಿದ್ದಾರೆ.ವಿಶೇಷ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಯಾಗಿತ್ತು. ರಾಮಲಲಾನ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೆರವೇರಿಸಿದ್ದರು. ಇದಾದ ಬಳಿಕ ಸಾರ್ವಜನಿಕರಿಗೆ ದರುಶನಕ್ಕೆ ರಾಮ ಮಂದಿರ ಮುಕ್ತವಾಗಿತ್ತು. ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಆಯೋಧ್ಯೆ ಭೇಟಿ ನೀಡಿದ ಮೋದಿ, ರಾಮ ಮಂದಿಕ್ಕೆ ತೆರಳಿ ಸಾಷ್ಟಾಂಗ ನಮಸ್ಕಾರ ಹಾಕಿ ಪೂಜೆ ಸಲ್ಲಿಸಿದ್ದಾರೆ.