ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರುಶನ ಮಾಡಿದ್ದಾರೆ.
ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದ್ದು, ಎಲ್ಲೆಡೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮೋದಿ ಅತ್ಯಂತ ಕಠಿಣವಾದ ಸಮುದ್ರದೊಳಗೆ ಇಳಿದು ದ್ವಾರಕ ದರ್ಶನ ಮಾಡಿ ಪೂಜೆ ಸಲ್ಲಿಸಿರುವುದು ಭಾರಿ ಶ್ಲಾಘನೆಗೆ ಒಳಗಾಗಿದೆ.ಈ ಅನುಭವವು ಭಾರತದ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಬೇರುಗಳಿಗೆ ಅಪರೂಪದ ಮತ್ತು ಆಳವಾದ ಸಂಪರ್ಕ ನೀಡಿದೆ.
ಈ ಕುರಿತು ಟ್ವೀಟ್ ಮಾಡಿದ ಮೋದಿ, ನೀರಿನಲ್ಲಿ ಮುಳುಗಿ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಮಾಡುವುದು ನನಗೆ ಒಲಿದ ಅತ್ಯಂತ ದಿವ್ಯ ಹಾಗೂ ಸುಂದರ ಅನುಭವವಾಗಿತ್ತು ಎಂದಿದ್ದಾರೆ.
Dwarka Darshan under the waters…where the spiritual and the historical converge, where every moment was a divine melody echoing Bhagwan Shri Krishna's eternal presence. pic.twitter.com/2HPGgsWYsS
— Narendra Modi (@narendramodi) February 25, 2024