ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ದಿನಗಳಿಂದ ಚುನಾವಣಾ ಕಣ ರಂಗೇರಿದ್ದು, ಖುದ್ದು ಪ್ರಧಾನಿ ಮೋದಿಯೇ ಕರ್ನಾಟಕಕ್ಕೆ ಆಗಮಿಸಿ ಪ್ರಚಾರ ಮಾಡುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದು, ಕೆಲವು ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರೋಡ್ ಶೋ ನಡೆಯಲಿದ್ದು, ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ.
ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ಸರ್ಕಲ್, ಆರ್ ಬಿ ಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮಾರಾಜಪೇಟೆ ಮುಖ್ಯ ರಸ್ತೆ. ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ.
ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್,ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳು ಬಂದ್ ಆಗಿರಲಿವೆ, ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗದಲ್ಲಿ ಪ್ರಯಾಣಿಕರು ಸಂಚರಿಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರಿನ ಜತೆಗೆ ಪ್ರಧಾನಿ ಮೋದಿ ಬಾದಾಮಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬಾದಾಮಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.