ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈಲು ಸೇರಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಮತ್ತೆ ಅವರ ಶಿಕ್ಷಣದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಪ್ರಧಾನಿ ಮೋದಿಯವರ ಶೈಕ್ಷಣಿಕ ವಿದ್ಯಾರ್ಹತೆ ಕೊರತೆಯು ದೇಶಕ್ಕೆ ಅಪಾಯಕಾರಿಯಾಗಿದ್ದು, ದೇಶದ ಪ್ರಗತಿಗೆ ಪ್ರಧಾನಿ ಮೋದಿ ಶಿಕ್ಷಣ ಪಡೆಯುವುದು ಅಗತ್ಯ ಎಂದಿದ್ದಾರೆ.
ನಾವು ಇಂದು 21 ನೇ ಶತಮಾನದಲ್ಲಿ ವಾಸಿಸುತ್ತಿದ್ದೇವೆ, ಪ್ರಪಂಚದಾದ್ಯಂತ ವಿಜ್ಞಾನ, ತಂತ್ರಜ್ಞಾನದಲ್ಲಿ ಪ್ರತಿ ದಿನ ಹೊಸ ಪ್ರಗತಿಯನ್ನು ಸಾಧಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಐ ಬಗ್ಗೆ ಮಾತನಾಡುತ್ತಿದ್ದಾರೆ. ಭಾರತದ ಪ್ರಧಾನಿಗೆ ಶಿಕ್ಷಣ ಕಡಿಮೆ, ವಿಜ್ಞಾನದ ಪ್ರಾಥಮಿಕ ಜ್ಞಾನವೂ ಇಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹಾಗೆ ಬೇರೆ ರಾಷ್ಟ್ರಗಳ ಅಧ್ಯಕ್ಷರು ಪ್ರಧಾನಿಯನ್ನು ಅಪ್ಪಿಕೊಂಡಾಗ ಎಷ್ಟು ಹಣ ಕೊಟ್ಟು ಒಪ್ಪಂದಗಳಿಗೆ ಸಹಿ ಹಾಕುತ್ತಾರೋ ಅದೂ ಕೂಡ ಗೊತ್ತಿಲ್ಲ. ಪ್ರಧಾನಿ ಅಜ್ಞಾನದಿಂದ ದೇಶಕ್ಕೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
मनीष सिसोदिया ने जेल से देश के नाम चिट्ठी लिखी –
प्रधानमंत्री का कम पढ़ा-लिखा होना देश के लिए बेहद ख़तरनाकमोदी जी विज्ञान की बातें नहीं समझते
मोदी जी शिक्षा का महत्व नहीं समझते
पिछले कुछ वर्षों में 60,000 स्कूल बंद किए
भारत की तरक़्क़ी के लिए पढ़ा-लिखा पीएम होना ज़रूरी pic.twitter.com/VpPyY1Jr2v
— Arvind Kejriwal (@ArvindKejriwal) April 7, 2023
ಪ್ರಧಾನಿಗೆ ಇಂದಿನ ಯುವಕರ ಕನಸುಗಳನ್ನು ನನಸು ಮಾಡುವ ಸಾಮರ್ಥ್ಯವಿದೆಯೇ, ಇತ್ತೀಚಿನ ವರ್ಷಗಳಲ್ಲಿ ದೇಶದಾದ್ಯಂತ 60,000 ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು, ಏಕೆ?. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿದ್ದರೆ ಮಕ್ಕಳು ಬರುತ್ತಿದ್ದರು, ಈಗ ದೆಹಲಿಯಲ್ಲಿ ನಡೆಯುತ್ತಿರುವಂತೆ ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಪ್ರಾರಂಭಿಸಿದ್ದಾರೆ.ಕಡಿಮೆ ವಿದ್ಯಾವಂತರೆಂದು ಹೆಮ್ಮೆಪಡುವ ದೇಶದ ಪ್ರಧಾನಿ ಸಾಮಾನ್ಯ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಎಂದಿಗೂ ಒದಗಿಸುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ 60000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದು ಇದಕ್ಕೆ ಜೀವಂತ ಸಾಕ್ಷಿ ಎಂದು ಬರೆದಿದ್ದಾರೆ.