ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಇಂದಿನಿಂದ ಬಂಡೀಪುರ ಅರಣ್ಯದಲ್ಲಿ ಸಫಾರಿ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸುತ್ತಿದ್ದಾರೆ. ಏಪ್ರಿಲ್‌ 9ರಂದು ಬಂಡೀಪುರಕ್ಕೆ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆ ಇಂದಿನಿಂದಲೇ ಬಂಡೀಪುರ ಅರಣ್ಯದಲ್ಲಿ ಪ್ರವಾಸಿಗರಿಗೆ ಸಫಾರಿ ನಿಷೇಧಿಸಲಾಗಿದೆ.

ಇಂದಿನಿಂದ ಏಪ್ರಿಲ್ 9ರವರೆಗೆ ಬಂಡೀಪುರ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್​ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ರಸ್ತೆ ನಿರ್ವಹಣೆ, ಪೂರ್ವ ಸಿದ್ಧತೆ, ಪ್ರಧಾನಿ ರಕ್ಷಣೆ ದೃಷ್ಟಿಯಿಂದ ನಿರ್ಬಂಧಿಸಿ ಚಾಮರಾಜನಗರ ಡಿಸಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!