ಇಂದು ತಿರುವನಂತಪುರ-ಕಾಸರಗೋಡು ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಿರುವನಂತಪುರ ಸೆಂಟ್ರಲ್ ಮತ್ತು ಕಾಸರಗೋಡು ನಡುವಿನ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಮೋದಿ ತಿರುವನಂತಪುರದ ಸೆಂಟ್ರಲ್‌ ರೈಲು ನಿಲ್ದಾಣದಿಂದ ಚಾಲನೆ ನೀಡಲಿದ್ದು, ಏ. 26ರಿಂದ ರೈಲು ಸಂಚಾರ ಆರಂಭಿಸಲಿದೆ.

ಕೇರಳದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಇದಾಗಿದ್ದು, ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ವಿವಿಧ ನಗರಗಳು, 11 ಜಿಲ್ಲೆಗಳನ್ನು ಸಂಪರ್ಕಿಸಲಿದೆ.

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ರೈಲ್ವೆ, ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ವಿದೇಶಾಂಗ ಖಾತೆ ಸಚಿವ ವಿ. ಮುರಳೀಧರನ್‌ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!