ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜುಲೈ 21ರಿಂದ ಆರಂಭವಾದ ಮುಂಗಾರು ಅಧಿವೇಶನದಲ್ಲಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ಹೊರತುಪಡಿಸಿದರೆ ಯಾವುದೇ ಅಭಿವೃದ್ಧಿ ಯೋಜನೆಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆದಿಲ್ಲ. ಹೀಗಾಗಿ ಮೋದಿ ಅವರು ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ರಷ್ಯಾದಿಂದ ಮಿಲಟರಿ ಉಪಕರಣಗಳು ಮತ್ತು ಇಂಧನವನ್ನು ಖರೀದಿಸಿದಕ್ಕಾಗಿ ಅಮೆರಿಕವು ಆಗಸ್ಟ್ 1ರಿಂದ ಜಾರಿಯಾಗುವಂತೆ ಭಾರತಕ್ಕೆ ಶೇ 25ರಷ್ಟು ರಫ್ತು ಸುಂಕವನ್ನು ವಿಧಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ಭೇಟಿ ಮಹತ್ವದಾಗಿದೆ.