ಸತ್ಯ ತಿಳಿಯಲು ಇಷ್ಟು ವರ್ಷ ಬೇಕಿತ್ತಾ? ಭಯೋತ್ಪಾದನೆ ಪಾಕ್‌ನ ಪ್ರಮುಖ ಸಮಸ್ಯೆ ಎಂದ ಪ್ರಧಾನಿ ಶೆಹಬಾಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನ ಭಯೋತ್ಪಾದಕ ಕೇಂದ್ರಗಳ ನೆಲೆ ಎಂದು ಇಡೀ ವಿಶ್ವವೇ ಹೇಳುತ್ತಿದೆ. ಇದರ ನಡುವೆ ಇಷ್ಟು ಬರೀ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಆ ದೇಶದ ಪ್ರಧಾನಿ ಶೆಹಬಾಜ್ ಷರೀಫ್ ಪಾಕಿಸ್ತಾನದಲ್ಲಿ ಭಯೋತ್ಪಾದನೆ ಬೇರು ಬಿಟ್ಟಿರುವುದನ್ನು ಸ್ವತಃ ಅವರೇ ಒಪ್ಪಿಕೊಂಡರು. ಭಯೋತ್ಪಾದನೆಯು ಪಾಕಿಸ್ತಾನದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಬುಧವಾರ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದ ಲಕ್ಕಿ ಮಾರ್ವಾಟ್‌ನಲ್ಲಿ ನಡೆದ ದಾಳಿಯಲ್ಲಿ ಆರು ಪೊಲೀಸರು ಸಾವನ್ನಪ್ಪಿದ್ದಾರೆ. ಮೋಟಾರ್ ಸೈಕಲ್ ನಲ್ಲಿ ಬಂದ ಇಬ್ಬರು ಉಗ್ರರು ಪೊಲೀಸ್ ವ್ಯಾನ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರವಾಗಿ ಖಂಡಿಸಿದ್ದು, ನಾವು ಎಂದಿಗೂ ತಪ್ಪು ಮಾಡಬಾರದು. ಭಯೋತ್ಪಾದನೆಯು ಪಾಕಿಸ್ತಾನದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿ ಮುಂದುವರೆಯುತ್ತಿದೆ. ಇದು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು ಪೊಲೀಸರಿಗೆ ಶಾಪವಾಗಲಿದೆ. “ಲಕ್ಕಿ ಮಾರ್ವಾಟ್‌ನಲ್ಲಿ ಪೊಲೀಸ್ ವ್ಯಾನ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಲು ನನಗೆ ಪದಗಳು ಸಾಕಾಗುವುದಿಲ್ಲ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಷರೀಫ್ ಟ್ವೀಟ್ ಮಾಡಿದ್ದಾರೆ.

ಲಕ್ಕಿ ಮಾರ್ವತ್‌ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ದಾಳಿಯನ್ನು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಖಂಡಿಸಿದ್ದಾರೆ. ಘಟನೆಯ ಕುರಿತು ಮುಖ್ಯ ಕಾರ್ಯದರ್ಶಿ, ಐಜಿ ಖೈಬರ್ ಪಖ್ತುಂಖ್ವಾ ಅವರಿಂದ ವರದಿ ಕೇಳಲಾಗಿದೆ ಎಂದು ಫೆಡರಲ್ ಸಚಿವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!