ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಬಿಜೆಪಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕ್ರಾಸ್ ಕಂಟ್ರಿ ಸ್ಲಂ ರೇಸ್ನಲ್ಲಿ ದಿಲ್ಲಿ ಕೊಳೆಗೇರಿಗಳಲ್ಲಿ ವಾಸಿಸುವ ಸಾವಿರಾರು ಮಕ್ಕಳು ಮತ್ತು ಯುವಕರು ಭಾಗವಹಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಸೇವಾ ಪಖ್ವಾರ್ ಕಾರ್ಯಕ್ರಮದಡಿ ದಿಲ್ಲಿಯ ಧ್ಯಾನಚಂದ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಓಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ಎಲ್ಲ ವರ್ಗದ ಜನರೂ ಮುಖ್ಯವಾಹಿನಿಗೆ ಕರೆತರುವುದು ಪ್ರಧಾನಿ ಮೋದಿ ಗುರಿಯಾಗಿದೆ. ಶಿಕ್ಷಣದೊಂದಿಗೆ ಕ್ರೀಡೆ ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.