ಹೊಸದಿಗಂತ ವರದಿ ಉಡುಪಿ:
ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ.
ಭಾನುವಾರ ಬೆಳಗ್ಗೆ ಜೈಲಿನ ಮುಖ್ಯದ್ವಾರದ ಕಂಬಿಗೆ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಳ್ಳುವಾಗ ಸಹ ಕೈದಿಗಳು ಗಮನಿಸಿ, ಪಂಚೆಯನ್ನು ಕತ್ತರಿಸಿ ಜೀವ ಉಳಿಸಲು ಯತ್ನಿಸಿದ್ದಾರೆ. ತಕ್ಷಣ ಜೈಲಿನ ಅಧಿಕಾರಿಗಳು ಸದಾನಂದ ಶೇರಿಗಾರ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಜಿಲ್ಲೆಯ ಗಡಿ ಭಾಗ ಶಿರೂರಿನ ಒತ್ತಿನೆಣೆ ಬಳಿಯ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ವ್ಯಕ್ತಿಯನ್ನು ಸುಟ್ಟು ತಾನು ಎಂದು ಬಿಂಬಿಸಲು ಹೊರಟಿದ್ದ ಪ್ರಕರಣ ಪ್ರಮುಖ ಆರೋಪಿಯಾಗಿದ್ದರು.
ಮೃತದೇಹವನ್ನು ಅಜ್ಜರಕಾಡು ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.