ಹೊಸ ದಿಗಂತ ವರದಿ, ಮಡಿಕೇರಿ:
ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿರುವ ಘಟನೆ ಸೋಮವಾರಪೇಟೆಯ ಅಬ್ಬೂರುಕಟ್ಟೆಯಲ್ಲಿ ನಡೆದಿದೆ.
ಸೋಮವಾರಪೇಟೆಗೆ ಆಗಮಿಸುತ್ತಿದ್ದ ಓಮ್ನಿ ಹಾಗೂ ಬಾಣಾವರ ಮಾರ್ಗವಾಗಿ ಶನಿವಾರಸಂತೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ವ್ಯಾನಿನಲ್ಲಿದ್ದ ಮಡಿಕೇರಿಯ ರಾಕೇಶ್, ನಟರಾಜ್, ಪ್ರದೀಪ್ ಹಾಗೂ ಗುರುಪ್ರಸಾದ್ ಅವರುಗಳು ಗಾಯಗೊಂಡಿದ್ದಾರೆ.
ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರಲಾಗಿದೆ.