ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿದೆ. ಈ ಹಿನ್ನಲೆ ಗ್ಗೆ ವರದಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸಿಎಸ್ ಅವರಿಗೆ ನಿರಂತವಾಗಿ ವರದಿಯನ್ನು ಕೇಳುತ್ತಿದ್ದರೂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾತ್ರ ಒಂದು ಬಾರಿಗೆ ಮಾತ್ರವೇ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇಷ್ಟಕ್ಕೇ ಸುಮ್ಮನಾಗದ ರಾಜ್ಯಪಾಲರು ಹೆಚ್ಚಿನ ವಿವರಗಳೊಂದಿಗೆ ಮುಡಾ ಅಕ್ರಮದ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಸಂಬಂಧ ವರದಿ ನೀಡುವಂತೆ ಸಿಎಸ್ ಅವರಿಗೆ ಸೂಚಿಸಿದ್ದಾರೆ .