ಪ್ರಿಯಾಂಕ್ ಖರ್ಗೆ ಗೆಲುವಿಗಾಗಿ ಅಭಿಮಾನಿಗಳಿಂದ ದೀಡ್​ ನಮಸ್ಕಾರ

ಹೊಸ ದಿಗಂತ ವರದಿ, ಕಲಬುರಗಿ :

ವಿಧಾನಸಭಾ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಅರಂಭವಾಗಿದ್ದು, ತಮ್ಮ ನೆಚ್ಚಿನ ನಾಯಕರ ಗೆಲುವಿಗಾಗಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ್ ಖರ್ಗೆ ಗೆಲವು ಸಾಧಿಸಲಿ ಎಂದು ಅಭಿಮಾಗಳು ಈ ಭಾಗದ ಸುಪ್ರಸಿದ್ಧ ದೇವತೆಯಾದ ಶ್ರೀ ನಾಗಾವಿ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದ್ದು, ದೀಡ್​​ ನಮಸ್ಕಾರ ಹಾಕಿದ್ದಾರೆ.

ಬಸವರಾಜ ಕಟಮಳ್ಳಿ ಹಾಗೂ ರಾಜು ಗಟ್ಟು ಎಂಬುವರು ದೀಡ್​ ನಮಸ್ಕಾರ ಹಾಕಿದ್ದು, ಈ ಮೂಲಕ ಪ್ರಿಯಾಂಕ್ ಖರ್ಗೆ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಎರಡು ಅವಧಿಗಳ ಕಾಲ ಶಾಸಕರಾಗಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಗೆಲುವು ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ಸಹಕಾರವಾಗಬೇಕಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮತ್ತೆ ಗೆದ್ದು ಬರಬೇಕು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಅಭಿಮಾನಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!