ಪಾಕಿಸ್ತಾನ್ ಪರ ಘೋಷಣೆ ಪ್ರಕರಣ: ಎಫ್.ಐ.ಆರ್.ದಾಖಲು

ಹೊಸದಿಗಂತ ವರದಿ, ಮೈಸೂರು:

ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ ಮುಸ್ಲಿಂಮರು ತಮ್ಮ ಮನೆಗಳಿಗೆ ಹಿಂದಿರುಗುವ ವೇಳೆ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿಗಳ ವಿರುದ್ದ
ನಂಜನಗೂಡಿನ ಬಿಜೆಪಿ ನಗರಸಭಾ ಸದಸ್ಯ ಕಪಿಲೇಶ್ ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಾಂತಿಗೆ ಭಂಗ ತರುವಂತಹ ವಿಡಿಯೋ ವನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಸೌಹಾರ್ಧತೆಗೆ ಹಾಗೂ ದೇಶಭಕ್ತಿ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಯತ್ನ ಮಾಡಿದ್ದಾರೆ.ಸಾಮರಸ್ಯತೆಗೆ ಧಕ್ಕೆ ತಂದು, ವೈರತ್ವ ಬೆಳೆಯವಂತೆ ನಡೆದುಕೊಂಡಿದ್ದಾರೆoದು ದೂರಿನಲ್ಲಿ ಕಪಿಲೇಶ್ ಉಲ್ಲೇಖಿಸಿದ್ದಾರೆ.
ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕಲಪಿಲೇಶ್ ಒತ್ತಾಯಿಸಿದ್ದಾರೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!