ಮತ್ತೆ ನಾಲಿಗೆ ಹರಿಬಿಟ್ಟ ಪ್ರೊ. ಕೆ.ಎಸ್. ಭಗವಾನ್: ದೂರು ದಾಖಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಇದೀಗ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಭಗವಾನ್ ಅವರ ವಿರುದ್ಧ ವಿಶ್ವ ಹಿಂದೂ ಪರಿಷತ್, ಮತ್ತು ಬಜರಂಗದಳ ಕಾರ್ಯಕರ್ತರಿಂದ ದೂರು ದಾಖಲಿಸಲಾಗಿದೆ.
ಶ್ರೀರಾಮಚಂದ್ರರ ಕುರಿತು ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಶ್ರೀರಾಮಚಂದ್ರ ಮದ್ಯಸೇವನೆ ಮಾಡುತ್ತಿದ್ದ. ಸೀತೆಯನ್ನು ಕಾಡಿಗೆ ಅಟ್ಟಿದ್ದ ಎಂಬ ಭಗವಾನ್ ಹೇಳಿಕೆಯ ವಿರುದ್ಧ ರೊಚ್ಚಿಗೆದ್ದ ಹಿಂದು ಪರ ಕಾರ್ಯಕರ್ತರು ತಕ್ಷಣವೇ ಎಫ್‌ಐಆರ್ ದಾಖಲಿಸಿಕೊಂಡು ಬಂಧಿಸುವಂತೆ ಒತ್ತಾಯಿಸಿ ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!