ಹೊಸದಿಗಂತ ವರದಿ ಮಂಗಳೂರು:
ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜೆಲ್ಲೆಯ 4 ತಾಲೂಕುಗಳಲ್ಲಿ ಆ.6ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ ೧೪೪ ಜಾರಿಯಲ್ಲಿರಲಿದೆ. ಜನತೆ ಗುಂಪು ಗುಂಪಾಗಿ ಓಡಾಡುವುದು, ವಿನಾ ಕಾರಣ ತಿರುಗಾಡುವುದಕ್ಕೆ ಅವಕಾಶವಿಲ್ಲ. ಸಾರ್ವಜನಿಕ ಸಭೆ ಸಮಾರಂಭಗಳಿಗೂ ನಿಷೇಧ ಹೇರಲಾಗಿದೆ ಎಂದವರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮೂಲ್ಕಿ, ಪಣಂಬೂರು ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಗುರುವಾರ ರಾತ್ರಿಯಿಂದಲೇ ನಿಷೇಧಾಜ್ಡೆ ಜಾರಿಯಲ್ಲಿದೆ. ಸುರತ್ಕಲ್ನಲ್ಲಿ ಗುರುವಾರ ರಾತ್ರಿ ಮುಹಮ್ಮದ್ ಫಾಝಿಲ್ ಎಂಬ ಯುವಕನ ಹತ್ಯೆಯಾದ ಬಳಿಕ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದಾರೆ.