ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ ರಾಜ್ಯದ ಹರಿದ್ವಾರದ ದಾದಾ ಜಲಾಲ್ಪುರ ಪ್ರದೇಶದಲ್ಲಿ ಹಿಂದೂ ಧಾರ್ಮಿಕ ಮುಖಂಡರು ʼಮಹಾಪಂಚಾಯತ್ʼಗೆ ಕರೆ ನಿಡಿದ ಬೆನ್ನಲ್ಲೇ ಅದನ್ನು ನಿಷೇಧಿಸಿ ಹರಿದ್ವಾರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದಾದಾ ಜಲಾಲ್ಪುರ ಮತ್ತು ಸುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಕುರಿತು ಹರಿದ್ವಾರದ ಜಿಲ್ಲಾ ದಂಡಾಧಿಕಾರಿ ವಿಎಸ್ ಪಾಂಡೆ ಪ್ರತಿಕ್ರಿಯಿಸಿದ್ದು “ದಾದಾ ಜಲಾಲ್ಪುರ ಮತ್ತು ಸುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮತ್ತು ಎಲ್ಲಾ ಸಾರ್ವಜನಿಕ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಈ ಕಾರ್ಯಕ್ರಮಕ್ಕೆ (ಮಹಾಪಂಚಾಯತ್) ಯಾವುದೇ ಅನುಮತಿ ತೆಗೆದುಕೊಳ್ಳಲಾಗಿಲ್ಲ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ 33 ಜನರನ್ನು ಸಿಆರ್ಪಿಸಿ ಸೆಕ್ಷನ್ 107/16 ಅಡಿಯಲ್ಲಿ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಏಪ್ರಿಲ್ 16ರಂದು ಭಗವಾನ್ ಪುರದಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಚರ್ಚಿಸಲಾಗುತ್ತಿತ್ತು ಎಂದು ಆರೋಪಿಸಿ ಜಿಲ್ಲಾಡಳಿತವು ಅನುಮತಿಯನ್ನು ನಿರಾಕರಿಸಿತ್ತು.