ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪುತ್ತೂರು ಉಪ ವಿಭಾಗ ಮಟ್ಟದಲ್ಲಿ ಯಾವುದೇ ರೀತಿಯ ಗಲಭೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ತಂಗಡಿ
ತಾಲೂಕೂ ಸೇರಿ ಪುತ್ತೂರು ಉಪವಿಭಾಗಾದ್ಯಂತ ನಿಷೇದಾಜ್ಞೆ ಹೊರಡಿಸಿ ಆಡಳಿತ ಆದೇಶಿಸಿದೆ.
ಪ್ರವೀಣ್ ನೆಟ್ಟಾರ್ ಅವರ ಶವ ಯಾತ್ರೆ ಆರಂಭವಾಗಿದ್ದು, ಮೃತ ದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಅವರ ಊರು ಮನೆಯಾದ ಬೆಳ್ಳಾರೆಗೆ ಕರೆದೊಯ್ಯಲಾಗುತ್ತಿದೆ. ಈ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಲಿನಟ್ ಜಂಕ್ಷನ್ ಬಳಿ ಬಸ್ಸಿಗೆ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ತಿಳಿಸಿದೆ.