ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಅಂತ್ಯಗೊಳಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ತೀರ್ಪು ಕಾಯ್ದಿರಿಸಿದೆ.

ಸಿಬಿಐ ತನಿಖೆಗೆ ಸರ್ಕಾರದ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನ್ಯಾ.ಕೆ.ನಟರಾಜನ್‌ರಿದ್ದ ಹೈಕೋರ್ಟ್‌ ಪೀಠ ನಡೆಸುತ್ತಿತ್ತು. ಸದ್ಯ ಡಿ.ಕೆ.ಶಿವಕುಮಾರ್ ಹಾಗೂ ಸಿಬಿಐ ವಕೀಲರ ವಾದಮಂಡನೆ ಅಂತ್ಯಗೊಂಡಿದ್ದು, ಆದೇಶ ಕಾಯ್ದಿರಿಸಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!