ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುಕಾಶ್ಮೀರದ ಕುಲ್ಗಾಮ್ ನ ಗೋಪಾಲ್ಪೋರಾ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕಿ ರಜನಿ ಭಲ್ಲಾ ಹತ್ಯೆಯನ್ನು ಖಂಡಿಸಿ ಕಾಶ್ಮೀರಿ ಪಂಡಿತರು ಪ್ರತಿಭಟನೆ ಕೈಗೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಗೋಪಾಲ್ಪೋರಾದ ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ಭಯೋತ್ಪಾದಕರು ಶಾಲಾ ಶಿಕ್ಷಕಿ ರಜನಿ ಭಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ರಜನಿ ಭಲ್ಲಾ ರವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಕೊನೆಯುಸಿರೆಳೆದರು. ಇದು ಇತ್ತೀಚೆಗೆ ನಡೆಯುತ್ತಿರುವ ಕಾಶ್ಮೀರೀ ಪಂಡಿತರ ಮೂರನೇ ಕೊಲೆಯಾಗಿದ್ದು ಇದನ್ನು ಖಂಡಿಸಿ ತಮಗೆ ರಕ್ಷಣೆ ಒದಗಿಸುವಂತೆ ಹಾಗೂ ಕೊಲೆಗಾರರನ್ನು ಬಂಧಿಸುವಂತೆ ಆಗ್ರಹಿಸಿ ಕಾಶ್ಮೀರಿ ಪಂಡಿತರು ಶ್ರೀನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.