ಯುವ ಪತ್ರಕರ್ತನ ಮೇಲಿನ ಹಲ್ಲೆ ಖಂಡಿಸಿ ನಾಳೆ ಸಾಮರಸ್ಯ ವೇದಿಕೆಯಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಖಾಸಗಿ ಯೂಟ್ಯೂಬ್‌ ಚಾನೆಲ್‌ ಸಂವಾದದ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಯುವ ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಹಲ್ಲೆ ಮಾಡಿರುವವರನ್ನು ಬಂಧಿಸುವಂತೆ ಫ್ರೀಡಂ ಪಾರ್ಕ್ ಬಳಿ ನಾಳೆ (ಗುರುವಾರ) ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕಳೆದ ಶನಿವಾರ ಫ್ರಿಡಂ ಪಾರ್ಕ್‌ಬಳಿ ನಡೆದ ಪ್ರತಿಭಟನೆಯನ್ನು ವರದಿ ಮಾಡಲು ತೆರಳಿದ್ದ ಯುವ ಪತ್ರಕರ್ತನೊಬ್ಬನ ಮೇಲೆ ಗೂಂಡಾಗಳು ಅಮಾನವೀಯವಾಗಿ ಹಲ್ಲೆ ಮಾಡಿದ್ದರು. ಇದನ್ನು ವಿರೋಧಿಸಿ ಹಲ್ಲೆ ಮಾಡಿರುವ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಸ್ವಾತಂತ್ರ ಉದ್ಯಾನವನ(ಫ್ರೀಡಂ ಪಾರ್ಕ್) ಬಳಿ ಕರ್ನಾಟಕ ಸಾಮರಸ್ಯ ವೇದಿಕೆ ವತಿಯಿಂದ ನಾಳೆ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ವ್ಯಕ್ತಿ ಸ್ವಾತಂತ್ರ್ಯ, ವಿಚಾರ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಗೌರವಿಸುವ ನೂರಾರು ಗಣ್ಯ ನಾಗರಿಕರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!