ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಲಿಸರಿಂದ ಅನುಮತಿ ಪಡೆಯದೇ ಉಡುಪಿ ನಗರದ ಸಂಘ ಕಾರ್ಯಾಲಯದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಪಿ.ಎಫ್.ಐ ಕಾರ್ಯಕರ್ತರನ್ನು ಚದುರಿಸಲು ಪೋಲಿಸರು ಲಾಠಿ ಚಾರ್ಚ್ ನಡೆಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಪಿ.ಎಫ್.ಐ ಕಚೇರಿ ಮೇಲೆ ಎನ್.ಐ.ಎ ದಾಳಿಯನ್ನು ಖಂಡಿಸಿ ಉಡುಪಿಯಲ್ಲಿ ಪಿ.ಎಫ್.ಐ ಕಾರ್ಯಕರ್ತರು ಹಠಾತ್ತಾಗಿ ರಸ್ತೆ ತಡೆ ನಡೆಸಿದರು. ನಗರದ ಒಳಗೆ ಕಿ.ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು.
ಸ್ಥಳಕ್ಕೆ ಡಿವೈಎಸ್ಪಿ ಸುಧಾಕರ್ ನಾಯ್ಕ್, ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್ ಮತ್ತು ಸಿಬ್ಬಂದಿಗಳು ಆಗಮಿಸಿ ಲಾಠಿ ಚಾರ್ಚ್ ನಡೆಸಿ, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಬಿಗು ಪೋಲಿಸ್ ಭದ್ರತೆ ಮಾಡಲಾಗಿದೆ.