ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ ಘೋಷಣೆ ಮಾಡಲಾಗಿದೆ.
ಮಂಡ್ಯ, ಮದ್ದೂರಿನಲ್ಲಿ ರೈತರು ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ದಾರೆ.
ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದು, ನಂತರ ಮಂಡ್ಯಕ್ಕೆ ತೆರಳಿ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.