ಸಂಸತ್ತಿನಲ್ಲಿ ಪ್ರತಿಭಟನೆ ಕಾವು: NEP, ತ್ರಿಭಾಷಾ ಸೂತ್ರದ ವಿರುದ್ಧ ಡಿಎಂಕೆ ಸಂಸದರ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರ ಡಿಎಂಕೆ ಸಂಸದರು ಇಂದು ಸಂಸತ್ತಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ, ತ್ರಿಭಾಷಾ ವಿಷಯದ ಕುರಿತು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ತ್ರಿಭಾಷಾ ವಿಷಯದ ಕುರಿತು ನೀಡಿದ ಹೇಳಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಡಿಎಂಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು, ವಿಶೇಷವಾಗಿ ತ್ರಿಭಾಷಾ ಸೂತ್ರವನ್ನು ವಿರೋಧಿಸುತ್ತಿದೆ, ಇದು ತಮಿಳುನಾಡಿನ ಮೇಲೆ ಹಿಂದಿ ಹೇರುವ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದರು.

ಡಿಎಂಕೆ ಸಂಸದೆ ಕನಿಮೋಳಿ ಕೇಂದ್ರವು ತಮಿಳುನಾಡಿನ ಮಕ್ಕಳ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿದರು. “ಕೇಂದ್ರ ಸರ್ಕಾರ ತಮಿಳುನಾಡಿಗೆ ನೀಡಬೇಕಾದ ಹಣವನ್ನು ತಡೆಹಿಡಿಯುತ್ತಿದೆ, ನಾವು ತ್ರಿಭಾಷಾ ನೀತಿ ಮತ್ತು NEP ಗೆ ಸಹಿ ಹಾಕಬೇಕು ಎಂದು ಹೇಳುತ್ತಿದೆ. ಅವರು ತಮಿಳುನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ತಮಿಳುನಾಡಿನ ಮಕ್ಕಳಿಗೆ ಬರಬೇಕಾದ ಹಣವನ್ನು ತಡೆಹಿಡಿಯುವ ಹಕ್ಕು ಅವರಿಗೆ ಇಲ್ಲ. ನಿನ್ನೆ, ಧರ್ಮೇಂದ್ರ ಪ್ರಧಾನ್ ತುಂಬಾ ನಿಂದನೀಯ ರೀತಿಯಲ್ಲಿ ಪ್ರತಿಕ್ರಿಯಿಸಿದರು, ನಾವು ಅಪ್ರಾಮಾಣಿಕರು ಮತ್ತು ತಮಿಳುನಾಡಿನ ಜನರು ಅನಾಗರಿಕರು ಎಂದು ಹೇಳಿದರು. ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ. ಕ್ಷಮೆಯಾಚಿಸಬೇಕೆಂದು ನಿರೀಕ್ಷಿಸುತ್ತೇವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!