ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನಲ್ಲಿ ಮಂಗಳವಾರ ಉಗ್ರರು ಕಾಶ್ಮೀರಿ ಪಂಡಿತ್ನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಡಿತ್ ಹತ್ಯೆಯನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ರಕ್ಷಣೆ ನೀಡದ ಹೊರತು ಇಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪಂಡಿತ ಸಂಘದ ಪ್ರತಿನಿಧಿಗಳು ಆಗ್ರಹಿಸಿದ್ದಾರೆ. ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತ 2010-11ರಲ್ಲಿ ವಲಸಿಗರಿಗೆ ವಿಶೇಷ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ಚದುರಾ ತಹಸಿಲ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಉಗ್ರರು, ರಾಹುಲ್ ಭಟ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಾಶ್ಮೀರಿ ಪಂಡಿತರ ಮೇಲಿನ ಭಯೋತ್ಪಾದಕರ ದಾಳಿಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಪಂಡಿತ್ ಸಮುದಾಯದ ಪ್ರತಿನಿಧಿಗಳು ಕೇಂದ್ರ ಸಶಸ್ತ್ರ ಪಡೆಗಳನ್ನು ಇಲ್ಲಿ ಭದ್ರತೆಗೆ ನಿಯೋಜಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾಶ್ಮೀರ ತಮ್ಮ ಸಾಂಪ್ರದಾಯಿಕ ತಾಯ್ನಾಡು ಅಲ್ಲಿಂದ ಭಯೋತ್ಪಾದಕರನ್ನು ಹೊರಹಾಕಬೇಕು ಮತ್ತು ಅವರಿಗೆ ಶಾಶ್ವತ ರಕ್ಷಣೆ ನೀಡಬೇಕು ಎಂದು ಅಲ್ಲಿನ ಜನ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ಉಗ್ರರಿಂದ ಹತ್ಯೆಗೀಡಾದ ಪಂಡಿತ್ ರಾಹುಲ್ ಭಟ್ ಸಾವಿನ ಕುರಿತು ತನಿಖೆ ನಡೆಸುವಂತೆ ಅವರ ತಂದೆ ಬಿತಾ ಭಟ್ ಆಗ್ರಹಿಸಿದ್ದಾರೆ. ಹಗಲು ಹೊತ್ತಿನಲ್ಲಿ ಸರ್ಕಾರಿ ಕಚೇರಿಗೆ ನುಗ್ಗಿದವರನ್ನು ಹಿಡಿದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬೀತಾ ಭಟ್ ಆಗ್ರಹಿಸಿದರು.
#WATCH Government employees and families of Kashmiri Pandits living in the Kashmir Valley protest against the LG administration over the targeted killing of Kashmiri Pandit govt employee Rahut Bhat, in Budgam pic.twitter.com/8XXClAypai
— ANI (@ANI) May 13, 2022